
– ವೈಎಸ್ವಿ ದತ್ತ ಘರ್ ವಾಪ್ಸಿ
– ಜೆಡಿಎಸ್ ಅಧಿಕೃತ ಅಭ್ಯರ್ಥಿ ಧನಂಜಯ್ಗೆ ಕೊಕ್!
ಚಿಕ್ಕಮಗಳೂರು: ಮಾಜಿ ಶಾಸಕ ವೈ.ಎಸ್.ವಿ ದತ್ತ (YSV Datta) ಅವರು ಮರಳಿ ಜೆಡಿಎಸ್ಗೆ (JDS) ಬಂದಿದ್ದಾರೆ. ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧೆ ಮಾಡಲಿದ್ದಾರೆ.
ದತ್ತ ಅವರು ಇದೇ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಆಗ ಎಷ್ಟೇ ಕಷ್ಟ ಆದರೂ ಸರಿ ನಾನು ಬಂದೇ ಬರುತ್ತೇನೆ ಎಂದು ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ ಎಂದು ರೇವಣ್ಣ ಹೇಳಿದ್ದಾರೆ.
ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ನಿಂದ ಧನಂಜಯ್ ಅವರನ್ನು ಅಧಿಕೃತಗೊಳಿಸಲಾಗಿತ್ತು. ಆದರೆ ಈಗ ಧನಂಜಯ್ ಅವರಿಗೆ ಕೊಕ್ ನೀಡಲಾಗಿದೆ. ದತ್ತ ಅವರಿಗೆ ಟಿಕೆಟ್ ಎಂದು ಘೋಷಿಸಿದ್ದಾರೆ.












