ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.
ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ.
ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.
ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ.
ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ.
God does not give boons or curses. He only gives opportunities. What truly matters is what we make of those opportunities.
Shri Siddaramaiah avaru’s life is one of the finest reflections of this thought. From a humble village in Mysuru to leading Karnataka as Chief Minister, his journey stands as a testament to resilience, perseverance, and an unwavering commitment to social justice.
As he steps down from the office of the Chief Minister, I express my heartfelt gratitude and deep respect for his years of service and leadership to the people of Karnataka.
The impact of several public welfare schemes and the many developmental initiatives undertaken during his tenure will remain significant chapters in Karnataka’s growth story. Over nearly five decades in public life, he has shaped the political and social fabric of our state through people-centric governance and inclusive leadership.
Ever since I was entrusted with the responsibility of serving as KPCC President in 2020, Siddaramaiah avaru has stood firmly beside me like a pillar of strength. Together, we have worked shoulder to shoulder in strengthening the party and taking its vision to the people.
It has been a privilege to serve alongside him as Deputy Chief Minister and to continuously learn from his experience, wisdom, and political foresight. I sincerely hope his guidance will continue to inspire and strengthen all of us in the years ahead as we work towards Karnataka’s progress and welfare.
As the saying goes, “If you want to walk fast, walk alone. If you want to walk far, walk together.”
I look forward to carrying this journey forward together for the people of Karnataka.
Siddaramaiah












